ಶಿವಮೊಗ್ಗ: ವಿಜಯಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ನವೆಂಬರ್ 23ರ ಭಾನುವಾರ ನಡೆದ ಸಮಾರಂಭದಲ್ಲಿ ಬಿ. ವರಲಕ್ಷ್ಮಿ ಪ್ರಕಾಶ್ ಇವರಿಗೆ ಪಂಚರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಇವರು ಈ ಹಿಂದೆ ಪರಿಪೂರ್ಣ ಪ್ರತಿಷ್ಠಾನ ಫೌಂಡೇಶನ್, ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ ನಿಂದ ಬೆಂಗಳೂರಿನಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರಿಂದ ವೀರ ವನಿತೆ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು.
ಕಳೆದ ಜೂನ್ ನಲ್ಲಿ ಚಿತ್ರದುರ್ಗದಲ್ಲಿ ಕಲ್ಯಾಣ ಕರ್ನಾಟಕ ವೇದಿಕೆ ವತಿಯಿಂದ ನೀಡಲ್ಪಡುವ ದುರ್ಗದ ಸಿರಿ ಕಲಾ ವೈಭವ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ವರಲಕ್ಷ್ಮಿ ಇವರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಕ್ರೀಡೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ತೀರ್ಥಹಳ್ಳಿ ಸ್ತ್ರೀ ಶಕ್ತಿ ತಾಲೂಕು ಒಕ್ಕೂಟದ ಖಜಾಂಚಿ, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಧಾರ್ಮಿಕ ಪರಿಷತ್ತಿನ ಸದಸ್ಯೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಅಹಿಂದಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ, ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷೆಯಾಗಿದ್ದು ವಿವಿಧ ಸಂಘ, ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
📞 9113834502
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ
'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment