ಶಿವಮೊಗ್ಗ:’ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಅವರನ್ನು ನಿಗಮ ಮಂಡಳಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಸರ್ಕಾರ ಆದೇಶ ಹೊರಡಿಸಿದೆ.’
2024ರ ಜನವರಿ 26 ರಿಂದ ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ (KSFIC) ನಿಯಮಿತದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಇದೇ ಜನವರಿ 26 ಕ್ಕೆ ಮುಕ್ತಾಯಗೊಂಡಿತ್ತು.
ಇದೀಗ 2026ರ ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಅದೇ ರೀತಿ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿ ರಾಜ್ಯ ಅಧ್ಯಕ್ಷರಾಗಿ ಮುಂದುವರೆಯುವಂತೆ ಆದೇಶ ಹೊರಡಿಸಿದ್ದು, ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಅಂದರೆ, ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಮುಂದುವರೆಸಿ ಆದೇಶ ಹೊರಡಿಸಿದೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment