ಹೊಸನಗರ: ʼಸರ್ಕಾರಿ ಶಾಲೆಯ ಜಗುಲಿಯ ಆವರಣದ ಮರದ ಪಕಾಸಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹೊಸನಗರ ತಾಲ್ಲೂಕು ಬೈಸೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಘಟನೆ ನಡೆದಿದೆ.ʼ
ಬೈಸೆ ಗ್ರಾಮದ ನಿವಾಸಿ ರಾಕೇಶ್ ಜೋಗಿ (28) ಮೃತ ವ್ಯಕ್ತಿ. ರಾಕೇಶ್ ಶುಕ್ರವಾರ ರಾತ್ರಿ ಮನೆಯಿಂದ ಹಗ್ಗ ತೆಗೆದುಕೊಂಡು ಹೋಗಿದ್ದು, ಬೆಳಿಗ್ಗೆವರೆಗೂ ಮನೆಗೆ ವಾಪಾಸಾಗದ ಕಾರಣ ಪೋಷಕರು ಹುಡುಕಾಟ ನಡೆಸಿದ್ದರು. ನಂತರ ಶನಿವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment